Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

**ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡದಂತೆ ಆಗ್ರಹಿಸಿ ಮೂಡಿಗೆರೆಯಲ್ಲಿ ಸಾಂಕೇತಿಕ ಪ್ರತಿಭಟನೆ**

Spread the love

**ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡದಂತೆ ಆಗ್ರಹಿಸಿ ಮೂಡಿಗೆರೆಯಲ್ಲಿ ಸಾಂಕೇತಿಕ ಪ್ರತಿಭಟನೆ**

ಮೂಡಿಗೆರೆ, ಜೂನ್ 20: ಟಾಟಾ ಪವರ್ ಕಂಪನಿಯು ವಿದ್ಯುತ್ ವಿತರಣಾ ಪರವಾನಿಗೆಗಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅದನ್ನು ವಿರೋಧಿಸಿ ಮೂಡಿಗೆರೆ ಮೆಸ್ಕಾಂ ಉಪವಿಭಾಗದ ಕಚೇರಿ ಎದುರು ಕೆಪಿಟಿಸಿಎಲ್/ಎಸ್ಕಾಂ ನೌಕರರ ಸಂಘ, ಅಧಿಕಾರಿಗಳು ಹಾಗೂ ವಿದ್ಯುತ್ ಗುತ್ತಿಗೆದಾರರು ಸಂಯುಕ್ತವಾಗಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು, ಯಾವುದೇ ಕಾರಣಕ್ಕೂ ಟಾಟಾ ಪವರ್‌ಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡಬಾರದು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಗ್ರಾಹಕರ ಸೇವೆಯ ದೃಷ್ಟಿಯಿಂದ ವಿದ್ಯುತ್ ವಿತರಣಾ ವ್ಯವಸ್ಥೆ ಸರ್ಕಾರಿ ವಲಯದಲ್ಲೇ ಮುಂದುವರಿಯಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಿತೇಂದ್ರ ಕುಮಾರ್ ಮಾತನಾಡಿ, ವಿದ್ಯುತ್ ವಿತರಣಾ ಕ್ಷೇತ್ರದ ಖಾಸಗೀಕರಣದಿಂದ ಸಾರ್ವಜನಿಕ ಸೇವೆಗೆ ಧಕ್ಕೆಯಾಗುವ ಸಾಧ್ಯತೆ ಇದ್ದು, ಸರ್ಕಾರ ಹಾಗೂ ನಿಯಂತ್ರಣ ಆಯೋಗವು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಸುನಿಲ್, ಅನಿಲ್, ಧ್ರುವ, ಕಾರ್ಯದರ್ಶಿ ಕಿರಣ್, ಶಾಖಾಧಿಕಾರಿಗಳಾದ ರವಿಕುಮಾರ್, ಷಣ್ಮುಖ, ಮಂಜುನಾಥ್, ಜಾವೇದ್ ಹಾಗೂ ವಿದ್ಯುತ್ ಗುತ್ತಿಗೆದಾರರಾದ ಪಾಂಡು, ವಿನ್ಸಿ ಮತ್ತು ಉಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು.

Leave a Reply

Your email address will not be published. Required fields are marked *

Back To Top