Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

Spread the love

ಮೂಡಿಗೆರೆ, ಜು.೧೫:
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನಡೆ ಖಂಡಿಸಿ ಕಾಂಗ್ರೆಸ್
ಕಾರ್ಯಕರ್ತರಿ0ದ ಮೌನ ಧರಣಿ

ತಾಲೂಕಿನ ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಸಿ.ಬಿ.ಶಂಕರ್
ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ ಅವರು
ಏಕಪಕ್ಷೀಯವಾಗಿ ವಜಾಗೊಳಿಸಿದ್ದ ಹಿನ್ನಲೆಯಲ್ಲಿ ವಿರೋಧಿ ಬಣದ ನೂರಾರು
ಮಂದಿ ಕಾರ್ಯಕರ್ತರು ಬುಧವಾರ ಪಟ್ಟಣದ ಕಾಂಗ್ರೆಸ್ ಕಚೇರಿ ಎದುರು ಮೌನ
ಧರಣಿ ನಡೆಸಿದರು.


ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಪ್ರತಿಕ್ರಿಯಿಸಿದ ಧರಣಿ
ನಿರತರು, ಪಕ್ಷ ಕೊಟ್ಟಿರುವ ಜವಾಬ್ದಾರಿ ಸ್ಥಾನವನ್ನು ಸರಿಯಾಗಿ ನಿಭಾಯಿಸದಿದ್ದರೆ
ಅವರಿಗೆ ನೋಟೀಸು ನೀಡಬೇಕು. ಜತೆಗೆ ಜಿಲ್ಲಾಧ್ಯಕ್ಷರ ಗಮನಕ್ಕೆ ತಂದು
ನAತರ ವಜಾಗೊಳಿಸುವ ಕ್ರಮ ಕೈಗೊಳ್ಳಬೇಕು. ಆದರೆ ಅನೇಕ
ವರ್ಷದಿಂದ ಪಕ್ಷಕ್ಕಾಗಿ ಶ್ರಮಿಸುತ್ತಿರುವ ಕಸಬಾ ಹೋಬಳಿ ಅಧ್ಯಕ್ಷ
ಸಿ.ಬಿ.ಶಂಕರ್ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಯಮ ಬಾಹೀರವಾಗಿ
ಏಕಾಏಕಿ ವಜಾಗೊಳಿಸಿರುವ ಕ್ರಮ ಸರಿಯಲ್ಲವೆಂದು ಹೇಳಿದರು.
ಈ ಹಿನ್ನಲೆಯಲ್ಲಿ ಧರಣಿ ನಿರತರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು
ಪ್ರಾಮಾಣಿಕ ಕಾರ್ಯಕರ್ತರಿಗೆ ಗೌರವಿಸದೇ, ಸರ್ವಾಧಿಕಾರಿ ಧೋರಣೆ, ಪಕ್ಷದ
ಸಿದ್ಧಾಂತ ವಿರೋಧಿಯಾಗಿ, ಏಕಪಕ್ಷೀಯ ನಿರ್ಧಾರ ಕೈಗೊಳ್ಳುವ ಕಾರ್ಯ
ಮಾಡಿದ್ದಾರೆ. ಅವರನ್ನು ಪಕ್ಷದ ಜವಾಬ್ದಾರಿಯಿಂದ ವಜಾಗೊಳಿಸಿ ಕಿಕ್‌ಔಟ್
ಮಾಡಬೇಕೆಂದು ನಾಮಫಲಕ ಹಿಡಿದು ಧರಣಿ ನಡೆಸಿದರು.
ಧರಣಿ ಸ್ಥಳಕ್ಕೆ ಜಿಲ್ಲಾಧ್ಯಕ್ಷರು ಆಗಮಿಸಿ ತಮ್ಮ ಮನವಿ
ಸ್ವೀಕರಿಸಬೇಕೆಂದು ಅವರಿಗೆ ಪತ್ರ ಬರೆಯಲಾಗಿದೆ. ಒಂದು ವೇಳೆ
ಜಿಲ್ಲಾಧ್ಯಕ್ಷರು ಇಲ್ಲಿಗೆ ಆಗಮಿಸದೇ, ಮೌನ ಧರಣಿ ನಿರತರು ಹಾಗೂ
ಪದಾಧಿಕಾರಿಗಳ ಮೇಲೆ ಯಾವುದೇ ಶಿಸ್ತು ಕ್ರಮ ಕೈಗೊಂಡರೆ ಬ್ಲಾಕ್
ಕಾಂಗ್ರೆಸ್‌ನ ಎಲ್ಲಾ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಲು
ನಿರ್ಧರಿಸಲಾಗಿದೆ ಎಂದು ಹೇಳಿದರು. .
ಕೆಡಿಪಿ ಸದಸ್ಯ ಎಂ.ಎನ್.ಅಶ್ವತ್, ಬಣಕಲ್ ಹೋಬಳಿ ಅಧ್ಯಕ್ಷ ಸುಬ್ರಹ್ಮಣ್ಯ, ಕಸಬಾ
ಹೋಬಳಿ ಅಧ್ಯಕ್ಷ ಸಿ.ಬಿ.ಶಂಕರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಆರ್ಯ ಪಟೇಲ್,
ಎಸ್ಸೀ ಘಟಕದ ಅಧ್ಯಕ್ಷ ಸುಧೀರ್ ಚಕ್ರಮಣಿ, ನಗರಾಧ್ಯಕ್ಷ ಸುರೇಶ್‌ಜೈನ್,
ಮುಖಂಡರಾದ ದೀಕ್ಷಿತ್ ಕಣಚೂರು, ರವಿ ಕುನ್ನಳ್ಳಿ, ರಮೇಶ್ ಹೊಸ್ಕೆರೆ,
ಸುರೇಂದ್ರ ಉಗ್ಗೇಹಳ್ಳಿ, ತಿಲಕ್, ಸುಂದರ್‌ಪೂಜಾರಿ, ಜಯಮ್ಮ, ಸುಧಾ, ನಿಶಾಂತ್
ಪಾಟೀಲ್, ಮನೋಜ್ ದಾರದಹಳ್ಳಿ, ದೀಪು ಕಡಿದಾಳ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

Back To Top