Flash Story
“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”
ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ
ತಮಿಳುನಾಡಿಗೆ ಕಾವೇರಿ ನೀಡು ಬಿಡದಂತೆ ಒತ್ತಾಯಿಸಿ ಕರವೆ ಹಾಗೂ ರೈತ ಸಂಘದಿoದ ಪ್ರತಿಭಟನೆ
ನನ್ನ ಪ್ರೀತಿಯ ಹಿತೈಷಿಗಳೇ ನಾನು ನ್ಯಾಯಾಲಯದ ಆದೇಶಕ್ಕೆ ತಲೆಬಾಗುತ್ತೇನೆ. ಎಂ.ಕೆ ಪ್ರಾಣೇಶ್.
“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ
ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ
ಬಿಡದಿ ಟೌನ್​ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಬಂಡಾಯ: ಕ್ರಮ ಕೈಗೊಳ್ಳದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
ಮಾನವೀಯತೆ ಮೆರೆದ ಬಜರಂಗದಳ ಕಾರ್ಯಕರ್ತರು: ಹಸುವಿಗೆ ನೆರವೇರಿತು ಗೌರವಯುತ ಅಂತಿಮ ವಿಧಿ….!!

Category: ತಾಲೂಕು

“ಧರ್ಮ ಜಾಗೃತಿಗೆ ಗಣೇಶೋತ್ಸವ ಶಕ್ತಿಕೇಂದ್ರವಾಗಲಿ: ರಮಾನಂದಗೌಡ”

ಗಣೇಶೋತ್ಸವ ಧರ್ಮ, ಸಂಸ್ಕೃತಿ, ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವಸಾರ್ವಜನಿಕ ಹಿಂದೂ ಮಾಹಾಗಣಪತಿ ಸೇವಾ ಸಮಿತಿ ಪೂರ್ವಭಾವಿ ಸಭೆಯಲ್ಲಿ ರಮಾನಂದಗೌಡಗಣೇಶೋತ್ಸವ ಕೇವಲ ಹಬ್ಬವಲ್ಲ. ಧರ್ಮ, ಸಂಸ್ಕೃತಿ, ಸಾಧನೆ, ಸಮಾಜ ಸಂಘಟನೆ, ರಾಷ್ಟç ಚೇತನಕ್ಕಾಗಿ ಮಾಡುವಂತಹ ಮಹೋತ್ಸವ ಎಂದು ಸನಾತನ ಧರ್ಮ ಪ್ರಚಾರಕ ಮಂಗಳೂರಿನ ರಮಾನಂದಗೌಡ ಹೇಳಿದರು. ಅವರು ಭಾನುವಾರ ಸಂಜೆ ಪಟ್ಟಣದ ಅಡ್ಯಂತಾಯ ರಂಗಮAದಿರದಲ್ಲಿ ಸಾರ್ವಜನಿಕ ಹಿಂದೂ ಮಹಾ ಗಣಪತಿ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ ಆಚರಿಸುವ ಬಗ್ಗೆ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರವಚನ ನೀಡಿ ಮಾತನಾಡಿದರು. […]

ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆ

ಮೂಡಿಗೆರೆಯಲ್ಲಿ ಆಗಸ್ಟ್ 6ರಂದು ಮೆಸ್ಕಾಂ ಜನಸಂಪರ್ಕ ಸಭೆವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಹಕರಿಂದ ಅಹವಾಲು ಸ್ವೀಕಾರಮೂಡಿಗೆರೆ, ಆ.4: ಮೆಸ್ಕಾಂ ಮೂಡಿಗೆರೆ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ವತಿಯಿಂದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಆಗಸ್ಟ್ 6, 2026 (ಗುರುವಾರ) ರಂದು ಜನಸಂಪರ್ಕ ಸಭೆ ಆಯೋಜಿಸಲಾಗಿದೆ.ಸಭೆಯು ಬೆಳಿಗ್ಗೆ 11:00 ಗಂಟೆಗೆ ಮೂಡಿಗೆರೆ ಮೆಸ್ಕಾಂ ಕಚೇರಿಯಲ್ಲಿ ನಡೆಯಲಿದೆ. ವಿದ್ಯುತ್ ಸಂಪರ್ಕ, ವಿದ್ಯುತ್ ಬಿಲ್, ಹೊಸ ಸಂಪರ್ಕ, ಟ್ರಾನ್ಸ್‌ಫಾರ್ಮರ್, ವಿದ್ಯುತ್ ಲೈನ್ ದೋಷ, […]

“ಹಿರಿಯರನ್ನು ಅವಮಾನಿಸುತ್ತಿದ್ದಾರೆ” – ನಯನ ಮೋಟಮ್ಮ ವಿರುದ್ಧ ಎಂ.ಪಿ. ಕುಮಾರಸ್ವಾಮಿ ಗಂಭೀರ ಆರೋಪ

ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಹಿರಿಯ ನಾಯಕರ ಕಡೆಗಣನೆಗೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ​ಮೂಡಿಗೆರೆ: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.​ಪಕ್ಷದ ತಳಮಟ್ಟದಿಂದ ದುಡಿದ ಹಿರಿಯ ಮುಖಂಡರನ್ನು ಏಕಾಏಕಿ ಹುದ್ದೆಗಳಿಂದ ಕಿತ್ತೊಗೆಯುತ್ತಿರುವುದು ಕಾರ್ಯಕರ್ತರ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.​ಗ್ಯಾರಂಟಿ ಅಧ್ಯಕ್ಷ ಸ್ಥಾನದಿಂದ ಜಯರಾಮ್ ಗೌಡರ ವಜಾಕ್ಕೆ ತೀವ್ರ […]

ಕೋಳೂರು ರಸ್ತೆ ಅವ್ಯವಸ್ಥೆ: ವಿದ್ಯಾರ್ಥಿಗಳ ಪರದಾಟ, ಪಂಚಾಯತ್ ವಿರುದ್ಧ ಸ್ಥಳೀಯರ ಕಿಡಿ

ಕಂಬಳದ ಕೆಸರುಗದ್ದೆಯಂತಾದ ಕೋಳೂರು ರಸ್ತೆ ಶಾಲಾ ಮಕ್ಕಳ ಹರಸಾಹಸ, ಪಂಚಾಯತ್ ನಿರ್ಲಕ್ಷ್ಯಕ್ಕೆ ಆಕ್ರೋಶ​ಮೂಡಿಗೆರೆ: ಕಂಬಳದ ಕೆಸರುಗದ್ದೆಯನ್ನು ನೋಡಲು ಕರಾವಳಿಗೇ ಹೋಗಬೇಕಾಗಿಲ್ಲ, ಮೂಡಿಗೆರೆ ತಾಲ್ಲೂಕಿನ ಬೆಟ್ಟಿಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಳೂರಿಗೆ ಬಂದರೆ ಸಾಕು! ಮಳೆಗಾಲ ಬಂತೆಂದರೆ ಮಲೆನಾಡಿನ ರಸ್ತೆಗಳ ಪಾಡು ಹೀಗೆಯೇ ಎನ್ನುವಂತಾಗಿದ್ದು, ಇಲ್ಲಿನ ದುಸ್ಥಿತಿಯನ್ನು ಅಷ್ಟು ಸುಲಭವಾಗಿ ತಳ್ಳಿಹಾಕಲು ಸಾಧ್ಯವಿಲ್ಲ.​ಕೆಸರು ಹಳ್ಳ ದಾಟಿಯೇ ಶಾಲೆಗೆ ಬರಬೇಕು ಮಕ್ಕಳು! ​ಕೋಳೂರು ಗ್ರಾಮದ ಈ ರಸ್ತೆಯಲ್ಲಿ ನಿಂತಿರುವ ವಿದ್ಯಾರ್ಥಿಗಳು ಪಕ್ಕದ ಹಳಿಕೆ ಗ್ರಾಮದವರಾಗಿದ್ದು, ಅವರು ಪ್ರತಿನಿತ್ಯ ಇದೇ ಕೆಸರು […]

ಬಣಕಲ್ ರೈತ ಸಂಪರ್ಕ ಕೇಂದ್ರದಲ್ಲಿ ಬತ್ತ ಹಾಗೂ ಪ್ರೋಮ್ ವರ್ಮಿ ಕಂಪೋಸ್ಟ್ ಉಚಿತ ವಿತರಣೆ

: ರೈತ ಸಂಪರ್ಕ ಕೇಂದ್ರ, ಬಣಕಲ್ (RNR) ವತಿಯಿಂದ ರೈತರಿಗೆ ಬತ್ತದ ಬೀಜ ಹಾಗೂ ಪ್ರೋಮ್ ವರ್ಮಿ ಕಂಪೋಸ್ಟ್ ಅನ್ನು ಉಚಿತವಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ಸುಮ ಅವರು ರೈತರಿಗೆ ಸರ್ಕಾರದ ವಿವಿಧ ಕೃಷಿ ಯೋಜನೆಗಳು ಹಾಗೂ ಗುಣಮಟ್ಟದ ಕೃಷಿ ಪರಿಕರಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.ಈ ಸಂದರ್ಭದಲ್ಲಿ ದಾಸ್ತಾನು ನಿರ್ವಾಹಕ ಪ್ರದೀಪ್, ತಾಂತ್ರಿಕ ಸಹಾಯಕಿ ಶ್ವೇತಾ ಹಾಗೂ ರೈತರು ಉಪಸ್ಥಿತರಿದ್ದು, ಯೋಜನೆಯಡಿ ವಿತರಿಸಲಾದ ಸೌಲಭ್ಯಗಳನ್ನು ಪಡೆದುಕೊಂಡರು.

ಧಾರಾಕಾರ ಮಳೆ ಹಿನ್ನೆಲೆ: ಮೂಡಿಗೆರೆ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ

ಮೂಡಿಗೆರೆ ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ದಿನಾಂಕ 07-07-2026 (ಮಂಗಳವಾರ) ರಂದು ಮೂಡಿಗೆರೆ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.ಮೂಡಿಗೆರೆ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.

ಕೆಂಪೇಗೌಡರ ಆದರ್ಶಗಳು ಯುವಜನತೆಗೆ ದಾರಿದೀಪ: ಎಂ.ಕೆ. ಪ್ರಾಣೇಶ್

ಮೂಡಿಗೆರೆ, ಜೂ.27:ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಸಮಾಜದ ಒಳಿತಿಗಾಗಿ ದೂರದೃಷ್ಟಿಯುಳ್ಳ ಆಡಳಿತಗಾರ, ಸಮಾಜಮುಖಿನಾಯಕ ಹಾಗೂ ಕನ್ನಡ ನಾಡಿನ ಹೆಮ್ಮೆಯ ಪುತ್ರ ಕೆಂಪೇಗೌಡರ ಜೀವನಚರಿತ್ರೆಯನ್ನು ಯುವ ಜನತೆ ತಿಳಿದುಕೊಳ್ಳಬೇಕೆಂದು ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.ಅವರು ಶನಿವಾರ ಪಟ್ಟಣದ ಬಿಜಿಎಸ್ ಒಕ್ಕಲಿಗರ ಸಂಘ ಪಿಯು ಕಾಲೇಜುಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ಏರ್ಪಡಿಸಿದ್ದ 517ನೇನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೆಂಪೇಗೌಡರು 16ನೇ ಶತಮಾನದಲ್ಲಿ ಬೆಂಗಳೂರನ್ನು ಯೋಜಿತನಗರವನ್ನಾಗಿ ರೂಪಿಸಿದರು. ಕೆರೆಗಳು, ಉದ್ಯಾನಗಳು, ದೇವಾಲಯಗಳು,ರಸ್ತೆಗಳನ್ನು ನಿರ್ಮಿಸಿ ಜನರ ಬದುಕು ಸುಧಾರಿಸುವ […]

ಜೇನುಬೈಲ್ ಕಟ್ಟಡ ವಿವಾದ: ಆರೋಪಗಳೆಲ್ಲ ಸುಳ್ಳು ಎಂದ ಗೌತಮ್

ಮೂಡಿಗೆರೆ, ಜೂ.23: ಅಕ್ರಮ ವಾಣಿಜ್ಯ ಮಳಿಗೆ ನಿರ್ಮಿಸಿಲ್ಲ: ಗೌತಮ್ ಸ್ಪಷ್ಟನೆ ತಾಲೂಕಿನ ಜೇನಬೈಲ್ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 73 ರಸ್ತೆ ಬದಿಯಲ್ಲಿ ತನ್ನ ತಂದೆ ಅಕ್ರಮವಾಗಿ ವಾಣಿಜ್ಯ ಮಳಿಗೆ ಕಟ್ಟುತ್ತಿಲ್ಲವೆಂದು ಗೌತಮ್ ಹೊಯ್ಸಳು ಹೇಳಿದರು. “ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೇನುಬೈಲ್ ಗ್ರಾಮದಲ್ಲಿ ತನ್ನ ತಂದೆ ಉದಯ ಅವರು 30 ವರ್ಷದ ಹಿಂದಿನ ಹಳೆ ಕಟ್ಟಡವನ್ನೇ ಹೊಸ ಮಾದರಿಯಲ್ಲಿ ದುರಸ್ತಿಪಡಿಸಿದ್ದಾರೆ. ಅದರಲ್ಲಿ ವಾಣಿಜ್ಯ ಮಳಿಗೆಗಳು ಇವೆ. ಕೂಗಳತೆ ದೂರದಲ್ಲಿರುವ ಕುಮಾರ್ ಎಂಬುವರು ದಿನಸಿ ಅಂಗಡಿ ಇಟ್ಟುಕೊಂಡಿದ್ದು, ನಮ್ಮ […]

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ’ ಕಾನೂನು ಅರಿವು ಕಾರ್ಯಕ್ರಮ

ಮೂಡಿಗೆರೆ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಡಿಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು (ಜೂನ್ 12) *”ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ”*ದ ಕುರಿತು ವಿಶೇಷ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡಿಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಪ್ರಮುಖ ನ್ಯಾಯಾಧೀಶರು, ಶಿಕ್ಷಣಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮವನ್ನು ಮೂಡಿಗೆರೆಯ ಪ್ರಧಾನ ಸಿವಿಲ್ ನ್ಯಾಯಾಧೀಶರು […]

ಮಳೆಗಾಲದ ಪ್ರಕೃತಿ ವಿಕೋಪಕ್ಕೆ ಸನ್ನದ್ಧರಾಗಿ: ಶೌರ್ಯ ವಿಪತ್ತು ಘಟಕಕ್ಕೆ ಕರೆ

ಮೂಡಿಗೆರೆ, ಮಳೆಗಾಲದ ಪ್ರಕೃತಿ ವಿಕೋಪಕ್ಕೆ ಸನ್ನದ್ಧರಾಗಲುಶೌರ್ಯ ವಿಪತ್ತು ಘಟಕದ ತುರ್ತು ಸಭೆ ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪವನ್ನು ಸಮರ್ಥವಾಗಿಎದುರಿಸಲು ವಿಪತ್ತು ನಿರ್ವಹಣೆಯಲ್ಲಿ ತೊಡಗಿರುವ ಸ್ವಯಂಸೇವಕರು ಸದಾಸನ್ನದ್ಧರಾಗಿರಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹೇಳಿದರು.ಅವರು ಸೋಮವಾರ ಪಟ್ಟಣದ ತಾಲೂಕು ಯೋಜನಾ ಕಚೇರಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದಶೌರ್ಯ ವಿಪತ್ತು ಘಟಕದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದರು.ಮಲೆನಾಡು ಭಾಗದಲ್ಲಿ ಪ್ರತಿ ವರ್ಷ ರಸ್ತೆ, ಮನೆ, ಗುಡ್ಡ ಕುಸಿತ ಸೇರಿದಂತೆನಾನಾ ರೀತಿಯ ಸಮಸ್ಯೆಗಳು […]

Back To Top