ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ. ನಾಳೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.ಕಳಸ ತಹಶೀಲ್ದಾರ್ ಮಂಜುನಾಥ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಕೆಂಪೇಗೌಡರ ಆದರ್ಶಗಳು ಯುವಜನತೆಗೆ ದಾರಿದೀಪ: ಎಂ.ಕೆ. ಪ್ರಾಣೇಶ್
ಮೂಡಿಗೆರೆ, ಜೂ.27:ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಸಮಾಜದ ಒಳಿತಿಗಾಗಿ ದೂರದೃಷ್ಟಿಯುಳ್ಳ ಆಡಳಿತಗಾರ, ಸಮಾಜಮುಖಿನಾಯಕ ಹಾಗೂ ಕನ್ನಡ ನಾಡಿನ ಹೆಮ್ಮೆಯ ಪುತ್ರ ಕೆಂಪೇಗೌಡರ ಜೀವನಚರಿತ್ರೆಯನ್ನು ಯುವ ಜನತೆ ತಿಳಿದುಕೊಳ್ಳಬೇಕೆಂದು ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.ಅವರು ಶನಿವಾರ ಪಟ್ಟಣದ ಬಿಜಿಎಸ್ ಒಕ್ಕಲಿಗರ ಸಂಘ ಪಿಯು ಕಾಲೇಜುಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ಏರ್ಪಡಿಸಿದ್ದ 517ನೇನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೆಂಪೇಗೌಡರು 16ನೇ ಶತಮಾನದಲ್ಲಿ ಬೆಂಗಳೂರನ್ನು ಯೋಜಿತನಗರವನ್ನಾಗಿ ರೂಪಿಸಿದರು. ಕೆರೆಗಳು, ಉದ್ಯಾನಗಳು, ದೇವಾಲಯಗಳು,ರಸ್ತೆಗಳನ್ನು ನಿರ್ಮಿಸಿ ಜನರ ಬದುಕು ಸುಧಾರಿಸುವ […]

